Share this news

ಬೆಂಗಳೂರು: ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ಸಿಲುಕಿ ಸಿಎಂ ಸಿದ್ಧರಾಮಯ್ಯ ಒದ್ದಾಡುತ್ತಿದ್ದು, ಹಗರಣದ ನೈತಿಕ ಹೊಣೆಹೊತ್ತು ಸಿಎಂ ಸ್ಥಾನಕ್ಕೆ ಒತ್ತಡ ಹೆಚ್ಚಾದರೂ ಇದಕ್ಕೆಲ್ಲಾ ನಾನು ಜಗ್ಗಲ್ಲ, ಬಗ್ಗಲ್ಲ, ಇದೆಲ್ಲಾ ರಾಜಕೀಯ ವಿರೋಧಿಗಳ ಪಿತೂರಿ ಎನ್ನುವ ಆರೋಪ ಮಾಡುತ್ತಿರುವ ಸಿಎಂ ರಾತ್ರೋರಾತ್ರಿ ಯಾರ ಒತ್ತಡಕ್ಕೆ ಮಣಿದು ಪತ್ನಿ ಪಡೆದ 14 ಸೈಟ್ ಗಳನ್ನು ವಾಪಾಸು ಮಾಡಿದ್ರು ಎಂದು ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರದ ಅಧೀನದಲ್ಲಿರುವ ಲೋಕಾಯುಕ್ತ ತನಿಖಾ ಸಂಸ್ಥೆಯಿAದ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅವರೇ ಸಿಬಿಐ ಹಾಗೂ ಇಡಿ ತನಿಖೆಗೆ ಒತ್ತಾಯಿಸಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಇಡಿ ಇಸಿಐಆರ್ ಪ್ರಕರಣ ದಾಖಲಾಗಿದೆ. ಇಷ್ಟರವರೆಗೆ ನಾನು ಯಾರಿಗೂ ಹೆದರಲ್ಲ, ಬಗ್ಗಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯನವರು ಇಡಿ ಭಯದಿಂದ ಸೈಟ್ ವಾಪಾಸ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ ಎಂದು ನಾರಾಯಣಸ್ವಾಮಿ ಲೇವಡಿ ಮಾಡಿದ್ದಾರೆ.
ಸೈಟ್ ವಾಪಾಸು ಮಾಡಿದ ಮಾತ್ರಕ್ಕೆ ತನಿಖೆಯಿಂದ ಸಿಎಂ ಪಾರಾಗಲು ಸಾಧ್ಯವೇ ಇಲ್ಲ, ಆದ್ದರಿಂದ ಸಿದ್ಧರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

 

 

Leave a Reply

Your email address will not be published. Required fields are marked *